ಗುರುದಾಸ್ ಪುರ ಜಿಲ್ಲೆ ಅಂತರರಾಷ್ಟ್ರೀಯ ಗಡಿಯಲ್ಲಿನ ಡೇರಾ ಬಾಬಾ ನಾನಕ್ ನಿಂದ ಕರ್ತಾರ್ ಪುರ ವರೆಗಿನ ಕಾರಿಡಾರ್ ಅಭಿವೃದ್ದಿಗೆ ನ.22 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು, ಕೇಂದ್ರ ಸರ್ಕಾರದ ನಿರ್ಧಾರ 12 ಕೋಟಿ ನಾನಕ್ ಭಕ್ತಾದಿಗಳಿಗೆ ಸಂತಸದ ಸುದ್ದಿಯಾಗಿದೆ, ಕಾರಿಡಾರ್ ನಿರ್ಮಾಣ ಸೇತುವೆಗಳನ್ನು ನಿರ್ಮಿಸಲಿದೆ. ದ್ವೇಷವನ್ನು ಹೋಗಲಾಡಿಸಲಿದೆ. ಎರಡು ರಾಷ್ಟ್ರಗಳ ನಡುವೆ ಸೌಹಾರ್ದತೆಯನ್ನು ಉಂಟುಮಾಡಲಿದೆ ಎಂದು ಹೇಳಿದ್ದಾರೆ.