ಈ ಹಿಂದೆ 2004ರಲ್ಲಿ ಸಂಭವಿಸಿದ್ದ ಸುನಾಮಿ ಸಂದರ್ಭದಲ್ಲಿ ಸೇನೆಯ ಹೆಲಿಕಾಪ್ಟರ್ ಇಲ್ಲಿನ ನಿವಾಸಿಗಳ ನೆರವಿಗೆ ತೆರಳಿತ್ತಾದರೂ, ಹೆಲಿಕಾಪ್ಟರ್ ಮೇಲೆ ನಿವಾಸಿಗಳು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಹೆಲಿಕಾಪ್ಟರ್ ನಲ್ಲಿ ತೆರಳುವ ಯೋಜನೆಯನ್ನು ಮಾನವಶಾಸ್ತ್ರಜ್ಞರು ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ 1991ರಲ್ಲಿ ಮೊಟ್ಟ ಮೊದಲ ಬಾರಿಗೆ ಖ್ಯಾತ ಮಾನವಶಾಸ್ತ್ರಜ್ಞರಾದ ತ್ರಿಲೋಕ ನಾಥ್ ಪಂಡಿತ್ ಅವರು ಇಲ್ಲಿನ ಜನರನ್ನು ಸಂಪರ್ಕಿಸಿದ್ದರು. ಅವರಿಗೆ ತೆಂಗಿನಕಾಯಿಗಳನ್ನು ನೀಡುವ ಮೂಲಕ ಅವರು ದಾಳಿ ಮಾಡದಂತೆ ನೋಡಿಕೊಂಡು ಬೋಟ್ ಮೂಲಕ ಅಲ್ಲಿಂದ ಸುರಕ್ಷಿತವಾಗಿ ವಾಪಸ್ ಆಗಿದ್ದರು. ಇದೀಗ ಅದೇ ರೀತಿಯ ಯೋಜನೆಯನ್ನು ಮಾನವಶಾಸ್ತ್ರಜ್ಞರು ರೂಪಿಸುತ್ತಿದ್ದಾರೆ ಎನ್ನಲಾಗಿದೆ.