ಇದೇ ವೇಳೆ ಗುರುನಾನಕ್ ಅವರ 549 ನೇ ಜನ್ಮದಿನಾಚರಣೆಯ ಅಂಗವಾಗಿ ಸಿಖ್ ಧರ್ಮ ಗುರುಗಳನ್ನು ಸ್ಮರಿಸಿರುವ ಪ್ರಣಬ್ ಮುಖರ್ಜಿ, ಗುರುನಾನತ್ ಅವರ ಶಾಂತಿ ಹಾಗೂ ಏಕತೆಯ ಸಂದೇಶವನ್ನು ನೆನಪಿಸಿಕೊಳ್ಳುವುದು ಅಗತ್ಯ ಎಂದಿದ್ದಾರೆ. ಸಂತಸ ಹಾಗೂ ಶಾಂತಿಯ ಕುರಿತು ಚಾಣಕ್ಯನ ಮಾತುಗಳನ್ನು ನೆನಪಿಸಿರುವ ಮಾಜಿ ರಾಷ್ಟ್ರಪತಿಗಳು, ಜನರ ಸಂತಸದಲ್ಲೇ ರಾಜನ ಸಂತಸವೂ ಅಡಗಿದೆ, ಋಗ್ವೇದದಲ್ಲಿ ಒಗ್ಗಟ್ಟಿನಿಂದ ಜೀವಿಸಬೇಕು, ಒಂದೇ ಧ್ವನಿಯಾಗಿರಬೇಕೆಂದು ಹೇಳಿದೆ ಎಂದು ಮುಖರ್ಜಿ ತಿಳಿಸಿದ್ದಾರೆ.