ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಹದಗೆಟ್ಟ ನಂತರ ಗೋವಾ ಆಡಳಿತ ಪಕ್ಷದಲ್ಲಿನ ಆಗುಹೋಗುಗಳೂ ಹದಗೆಡುತ್ತಿದ್ದು, ಬಿಜೆಪಿ ಮಿತ್ರಪಕ್ಷಗಳೇ ಈಗ ರೆಬೆಲ್ ಆಗಿ, ಪರಿಕ್ಕರ್ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ನಡುವೆ ಗೋವಾ ಸಚಿವರು ಹೊಸ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.
ಅನಾರೋಗ್ಯಕ್ಕೀಡಾಗುತ್ತಿದ್ದಂತೆಯೇ ಗೋವಾ ಸಿಎಂ ಸ್ಥಾನಕ್ಕೆ ಪರಿಕ್ಕರ್ ರಾಜೀನಾಮೆ ನೀಡಲು ಬಯಸಿದ್ದರು. ಅವರು ನಿರ್ವಹಿಸುತ್ತಿದ್ದ ಖಾತೆಗಳನ್ನು ಬೇರೆ ಸಚಿವರಿಗೆ ಹಸ್ತಾಂತರಿಸಲು ಸಿದ್ಧರಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಬಿಡಲಿಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ಕೃಷಿ ಸಚಿವ ವಿಜಯ್ ಸರ್ದೇಸಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಿಡುವುದು ಈಗ ಮನೋಹರ್ ಪರಿಕ್ಕರ್ ಕೈಲಿ ಇಲ್ಲ ಎಂದು ವಿಜಯ್ ಸರ್ದೇಸಾಯಿ ಹೇಳಿದ್ದಾರೆ.