ಈ ಕುರಿತಂತೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಗುರುದಾಸ್ಪುರ ಅಂತರಾಷ್ಟ್ರೀಯ ಗಡಿ ಬಳಿ ನಿರ್ಮಾಣ ಮಾಡಲು ಯೋಜಿಸಿರುವ ಕರ್ತಾರ್ಪುರ ಕಾರಿಡಾರ್'ಗೆ ನಾನು ಹಾಗೂ ರಾಷ್ಟ್ರಪತಿ ಕೋವಿಂದ್ ಇಬ್ಬರೂ ಜಂಟಿಯಾಗಿ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇವೆಂಬುದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.