2,989 ಕೋಟಿ ರ್ಯು. ವೆಚ್ಚದಲ್ಲಿ ನಿರ್ಮಾಣವಾದ ಏಕತಾ ಪ್ರತಿಮೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ ಬೆನ್ನಿಗೇ ವಿವಿಧ ರಾಜ್ಯಗಳಲ್ಲಿ ನಾನಾ ಪ್ರತಿಮೆಗಳ ನಿರ್ಮಾಣದ ಕುರಿತು ಘೋಷಣೆಗಳು ಕೇಳಿಬಂದಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿ ರಾಮನ ಪ್ರತಿಮೆ ನಿರ್ಮಾಣ ಮಾಡುವುದಾಗಿ ಹೇಳಿದ್ದರೆ ಶಿವಸೇನೆ ಮಹಾರಾಷ್ಟ್ರದಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕರೆಕೊಟ್ಟಿತ್ತು. ಅಲ್ಲದೆ ಕರ್ನಾಟಕದಲ್ಲಿ 38 ಮೀಟರ್ ಎತ್ತರದ ಕಾವೇರಿ ಮಾತೆ ಪ್ರತಿಮೆ ಸ್ಥಾಪನೆ ಮಾಡುವ ಮಾತು ಸಹ ಕೇಳಿ ಬಂದಿತ್ತು.