ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರ ಕ್ರಮಕ್ಕೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಅವರು, ಕಾಶ್ಮೀರ ರಾಜ್ಯಪಾಲರ ಬಗ್ಗೆ ನಾನು ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದೆ, ಆದರೆ ಅವರೂ ಕೂಡ ಕೇಂದ್ರ ಸರ್ಕಾರದ ಒತ್ತೆಯಾಳಾಗಿದ್ದಾರೆ ಎಂಬುದು ನನಗೆ ಈಗ ತಿಳಿಯಿತು. ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಮುರಿದು ತಿಂಗಳುಗಳು ಕಳೆದ ಬಳಿಕ ಈಗ ರಾಜ್ಯಪಾಲರಿಗೆ ವಿಧಾನಸಭೆ ವಿಸರ್ಜಿಸಬೇಕು ಎಂದೆನಿಸಿದೆ. ಇದರ ಹಿಂದೆ ಕೇಂದ್ರ ಸರ್ಕಾರ ಕೈವಾಡವಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.