ಅಯೋಧ್ಯೆ: ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್'ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಇದರಂತೆ ಈಗಾಗಲೇ ಸಾವಿರಾರು ವಿಹೆಚ್'ಪಿ, ಶಿವಸೇನೆ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರು ಅಯೋಧ್ಯೆಗೆ ಆಗಮಿಸಿರುವ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸಿ, ಅಯೋಧ್ಯೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.