ರಾಜ್ಯದ ಯೋಜನೆಗೆ ತಮಿಳುನಾಡು ಆರಂಭದಿಂದಲೇ ತಗಾದೆ ತೆಗೆಯುತ್ತಿದೆ. ಆದರೆ, ಕೇಂದ್ರ ಜಲ ಆಯೋಗ, ರಾಜ್ಯ ಸಲ್ಲಿಸಿದ್ದ ಯೋಜನೆಯ ಪೂರ್ವ ಸಾಧ್ಯತಾ ವರದಿಗೆ ಒಪ್ಪಿಗೆ ಸೂಚಿಸಿದೆ. ಅಲ್ಲದೆ ಯೋಜನೆಯ ಸಂಪೂರ್ಣ ವರದಿಯನ್ನು ಕಳುಹಿಸಬೇಕು ಹಾಗೂ ಕರ್ನಾಟಕದಿಂದ ತಮಿಳುನಾಡಿಗೆ ಪ್ರತಿ ವರ್ಷ ಬಿಡುವ ಕಾವೇರಿ ನೀರು ಯಥಾವತ್ ಆಗಿರಬೇಕು ಎಂದಿದೆ.