ಈ ಮಧ್ಯೆ, ಮಲಿಕ್ ಹೇಳಿಕೆಗೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ತಿರಸ್ಕರಿಸಿದ ರಾಜ್ಯಪಾಲರ ಧೈರ್ಯವನ್ನು ಮೆಚ್ಚುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ನ್ಯಾಷನಲ್ ಕಾನ್ಫರೆನ್ಸ್ನ ಒಮರ್ ಅಬ್ದುಲ್ಲಾ ಕೂಡ ರಾಜ್ಯಪಾಲರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ವಿಸರ್ಜನೆ ಆದೇಶ ಹೊರಡಿಸಿದ್ದಾಗ ಈ ಇಬ್ಬರೂ ರಾಜ್ಯಪಾಲರ ವಿರುದ್ಧ ವಾಗ್ಧಾಳಿ ನಡೆಸಿದ್ದರು.