ನ್ಯಾಯಮೂರ್ತಿ ಲೋಯಾ ಸಾವಿನ ಕುರಿತು ವಕೀಲ ಸತೀಶ್ ಉಕೆ ಸಲ್ಲಿಸಿದ ಅರ್ಜಿ ನವೆಂಬರ್ 26ರಂದು ನ್ಯಾಯಮೂರ್ತಿಗಳಾದ ಎಸ್. ಬಿ. ಶುಕ್ರೆ ಮತ್ತು ಎಸ್ ಎಂ ಮೊಡಕ್ ಅವರನ್ನೊಳಗೊಂಡ ವಿಭಾಗೀಯ ಪೀಠದೆದುರು ವಿಚಾರಣೆಗೆ ಬಂದಿತ್ತು. ಆದರೆ ವಿಭಾಗೀಯ ಪೀಠ ವಿಚಾರಣೆಯಿಂದ ಹಿಂದೆ ಸರಿದಿದ್ದ ಕಾರಣ ಪ್ರಕ್ರಣವು ನ್ಯಾಯಮೂರ್ತಿಗಳಾದ ಪಿ.ಎನ್.ದೇಶಮುಖ್ ಹಾಗೂ ಸ್ವಪ್ನಾ ಜೋಷಿ ಅವರ ಎದುರು ಬಂದಿತ್ತು. ಆದರೆ ಇದೀಗ ಸ್ವಪ್ನಾ ಜೋಷಿ ತಾವು ಪ್ರಕರಣದಿಂದ ಹಿಂದೆ ಸರಿದಿದ್ದಾಗಿ ಘೊಷಿಸಿದ್ದಾರೆ.