ಅಂತೆಯೇ ಯಾರೇ ಆಗಲಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಬಾರದು. ಬಿಜೆಪಿ ಸರ್ಕಾರದ ಮೇಲೆ ನಮಗೆ ಸಾಕಷ್ಟು ಭರವಸೆ ಇತ್ತು. ಕ್ರಮೇಣ ಅದು ಕಡಿಮೆಯಾಗುತ್ತಿದ್ದು, ಈ ಸರ್ಕಾರ ಕೇವಲ ವಿಗ್ರಹಗಳನ್ನು ನಿರ್ಮಾಣ ಮಾಡುವುದಕ್ಕಷ್ಟೇ ಲಾಯಕ್ಕು, ರಾಮಮಂದಿರ ನಿರ್ಮಾಣಕ್ಕಲ್ಲ ಎಂದು ಸಂಸದ್ ನ ದ್ವಾರಕಾ-ಶಾರದಾ ಮತ್ತು ಜ್ಯೋತಿಶ್ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಹೇಳಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ರಾಮನ ವಿಗ್ರಹ ನಿರ್ಮಾಣ ಯೋಜನೆಯನ್ನು ವಿರೋಧಿಸಿದ ಅವರು, ಶ್ರೀರಾಮನ ವಿಗ್ರಹಕ್ಕಿಂತ ಮೊದಲು ರಾಮಮಂದಿರ ನಿರ್ಮಾಣವಾಗಬೇಕು. ಇದು ಎಲ್ಲ ಹಿಂದೂಗಳ ದಶಕಗಳ ಆಸೆಯಾಗಿದೆ ಎಂದು ಹೇಳಿದರು.