ದೆಹಲಿ ಮಂತ್ರಿ ಸತ್ಯೇಂದರ್ ಜೈನ್ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರ್ಕಾರ ಅಸ್ತು

ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಕುಮಾರ್ ಜೈನ್ ಅವರ ಕಾನೂನು ಬಾಹಿರ ಆಸ್ತಿ ವಶಪಡಿಸಿಕೊಳ್ಳಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸತ್ಯೇಂದರ್ ಕುಮಾರ್ ಜೈನ್
ಸತ್ಯೇಂದರ್ ಕುಮಾರ್ ಜೈನ್
Updated on
ನವದೆಹಲಿ: ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಕುಮಾರ್ ಜೈನ್ ಅವರ ಕಾನೂನು ಬಾಹಿರ ಆಸ್ತಿ ವಶಪಡಿಸಿಕೊಳ್ಳಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜೈನ್ ಕಳೆದ ಐದು ವರ್ಷಗಳಿಂದ ದೆಹಲಿಯ ಸುತ್ತಮುತ್ತ 200 ಬಿಘಾಸ್ (1 ಎಕರೆ= 4 ಬಿಘಾ) ಕೃಷಿ ಭೂಮಿಯನ್ನು ಬೇರೆ ಬೇರೆ ಸಂಸ್ಥೆಗಳ ಹೆಸರಲ್ಲಿ ಖರೀದಿಸಿದ್ದಾರೆ. ಅವರು ಇದಕ್ಕಾಗಿ  ಹಲವಾರು ಕೋಟಿ ರೂಪಾಯಿಗಳ ಅಕಪ್ಪು ಹಣವನ್ನು ಬಳಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
2017 ರ ಆಗಸ್ಟ್ 24 ರಂದು ಸಿಬಿಐ ಈ ಸಂಬಂಧ ಪ್ರಕರಣ ದಾಖಲಿಸಿತ್ತು. ಇದೀಗ ಕೇಂದ್ರ ಗೃಹ ವ್ಯವಹಾರ ಸಚಿವಾಲಯವು ಜೈನ್ ಅವರ ಅಕ್ರಮ ಆಸ್ತಿಯ ವಶಕ್ಕೆ ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com