ಮರಾಠ ಸಮುದಾಯದಂತೆಯೇ ನಮ್ಮಲ್ಲಿಯೂ ಬಡತನವಿದೆ. ಮುಸ್ಲಿಮರು ಹಲವು ವರ್ಷಗಳಿಂದ ಕಡು ಬಡತನದಲ್ಲಿ ಬದುಕುತ್ತಿದ್ದಾರೆ. ನಮ್ಮ ಸಮುದಾಯದ ಅಭಿವೃದ್ದಿಗಾಗಿ ವಿಶೇಷ ಮೀಸಲಾತಿ ಸೌಲಭ್ಯ ನೀಡಬೇಕು. ಮೀಸಲಾತಿಗೆ ನಮ್ಮ ಇಡೀ ಸಮುದಾಯ ಅರ್ಹವಾಗಿದೆ. ಇತರೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿದಂತೆಯೇ, ನಮಗೂ ಪ್ರಾಮುಖ್ಯತೆ ಕೊಡಬೇಕೆಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.