ತವಾಂಗ್ ನಲ್ಲಿ ಬಧುವಾರ ರಾಜ್ಯಪಾಲರು ಭಾಗವಿಸಿದ್ದ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಪೇಮಾ ಖಂಡು ಮತ್ತು ಸ್ಥಳೀಯ ಶಾಸಕರು ಚರ್ಚೆ ನಡೆಸಿದ್ದರು. ಈ ವೇಳೆ ಈ ವಿಚಾರ ರಾಜ್ಯಪಾಲರ ಗಮನಕ್ಕೆ ಬಂದಿತ್ತು. ಮಹಿಳೆಯೊಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಮುಂದಿನ 3 ದಿನಗಳ ಕಾಲ ತವಾಂಗ್ ಹಾಗೂ ಗುವಾಹಟಿ ಮಧ್ಯೆ ಹೆಲಿಕಾಪ್ಟರ್ ಸೇವೆ ಇಲ್ಲ ಎಂದು ಶಾಸಕರು ಮಾಹಿತಿ ನೀಡಿದ್ದರು. ಈ ವೇಳೆ ರಾಜ್ಯಪಾಲರು ತಮ್ಮ ಇಬ್ಬರು ಅಧಿಕಾರಿಗಳೊಂದಿಗೆ ಮಾತನಾಡಿ, ತಮ್ಮ ಹೆಲಿಕಾಪ್ಟರ್ ನಲ್ಲಿ ಮಹಿಳೆ ಹಾಗೂ ಆಕೆಯ ಪತಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು.