ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ವಿಜಯ್ ಸರ್ ದೇಸಾಯಿ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ...
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Updated on
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ ದೇಸಾಯಿ ಹೇಳಿದ್ದಾರೆ.
ಮನೋಹರ್ ಪರಿಕ್ಕರ್ ಅವರ ಸಂಪುಟದಲ್ಲಿ ವಿಜಯ್ ಸರ್ ದೇಸಾಯಿ ಕೃಷಿ ಸಚಿವರಾಗಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿರುವ ಪರಿಕ್ಕರ್ ಅವರನ್ನು ಹುದ್ದೆಯಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಅಕ್ಟೋಬರ್ 14ರಿಂದ ದೆಹಲಿಯ ಏಮ್ಸ್ ನಲ್ಲಿ ದಾಖಲಾಗಿದ್ದಾರೆ. ವಿರೋಧ ಪಕ್ಷಗಳ ನಾಯಕರು ಮನೋಹರ್ ಪರಿಕ್ಕರ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಬೇಕು ಎಂದು ಆಗ್ರಹಿಸಿದ್ದಾರೆ, ಆದರೆ ಬಿಜೆಪಿ ಮಾತ್ರ ಪರಿಕ್ಕರ್ ಅವರನ್ನು ಬದಲಾಯಿಸಲು ಹಿಂದೇಟು ಹಾಕುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com