ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ಅಸಮಾಧಾನಗೊಂಡಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂದರೆ ಹಾಸ್ಯದ ವಸ್ತುವಾಗಿಬಿಟ್ಟಿದೆ, ಯೋಗಿ ಆದಿತ್ಯನಾಥ್ ಅವರ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲಗೊಂಡಿದೆ ಎಂದು ಹಿಂದುಳಿದ ವರ್ಗ, ದಿವ್ಯಾಂಗ ಕಲ್ಯಾಣ ಇಲಾಖೆ ಸಚಿವ ಓಂ ಪ್ರಕಾಶ್ ರಾಜ್ಭರ್ ಹೇಳಿದ್ದಾರೆ.