ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಸ್ಯದ ವಸ್ತುವಾಗಿದೆ: ಸಿಎಂ ಯೋಗಿ ಮುಜುಗರ ಉಂಟುಮಾಡಿದ ಸಂಪುಟ ಸಹೋದ್ಯೋಗಿ!

ಉತ್ತರ ಪ್ರದೇಶದಲ್ಲಿ ಆಪಲ್ ಸಂಸ್ಥೆಯ ಉದ್ಯೋಗಿಯ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ತೀವ್ರ ಅಸಮಾಧಾನಗೊಂಡಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on
ಲಖನೌ: ಉತ್ತರ ಪ್ರದೇಶದಲ್ಲಿ ಆಪಲ್ ಸಂಸ್ಥೆಯ ಉದ್ಯೋಗಿಯ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ತೀವ್ರ ಅಸಮಾಧಾನಗೊಂಡಿದ್ದಾರೆ. 
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ಅಸಮಾಧಾನಗೊಂಡಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂದರೆ ಹಾಸ್ಯದ ವಸ್ತುವಾಗಿಬಿಟ್ಟಿದೆ, ಯೋಗಿ ಆದಿತ್ಯನಾಥ್ ಅವರ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲಗೊಂಡಿದೆ ಎಂದು ಹಿಂದುಳಿದ  ವರ್ಗ, ದಿವ್ಯಾಂಗ ಕಲ್ಯಾಣ ಇಲಾಖೆ ಸಚಿವ ಓಂ ಪ್ರಕಾಶ್ ರಾಜ್ಭರ್  ಹೇಳಿದ್ದಾರೆ. 
ಆಪಲ್ ಉದ್ಯೋಗಿಯಾಗಿದ್ದ ವಿವೇಕ್ ತಿವಾರಿ ಹತ್ಯೆ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂದು ಓಂ ಪ್ರಕಾಶ್ ರಾಜ್ಭರ್ ಹೇಳಿದ್ದಾರೆ.  ಬಿಜೆಪಿ ಮಿತ್ರ ಪಕ್ಷವಾಗಿರುವ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥರಾಗಿರುವ ರಾಜ್ಭರ್ ವಿವೇಕ್ ತಿವಾರಿ ಪ್ರಕರಣದಲ್ಲಿ ಪೊಲೀಸರು ನಡೆದಿರುವ ತಪ್ಪನ್ನು ಮುಚ್ಚಿಹಾಕುವುದಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಎನ್ ಕೌಂಟರ್ ಹೆಸರಿನಲ್ಲಿ ಸಾಮಾನ್ಯ ನಾಗರಿಕರೊಬ್ಬರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಪೊಲೀಸರು ಹಣ ಪಡೆದು ಜನರನ್ನು ಹತ್ಯೆ ಮಾಡುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಹಾಸ್ಯದ ವಿಷಯವಾಗಿಬಿತ್ಟಿದೆ ಯೋಗಿ ಆದಿತ್ಯನಾಥ್ ಅವರು ಅಪರಾಧವನ್ನು ತಡೆಗಟ್ಟುವಲ್ಲಿ ಯಶಸ್ವಿಯೂ ಆಗಿಲ್ಲ. ಜನತೆಗೆ ತಾವು ಸುರಕ್ಷಿತರಾಗಿದ್ದೇವೆ ಎಂಬ ನೆಮ್ಮದಿಯೂ ಇಲ್ಲ ಎಂದು ರಾಜ್ಭರ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com