ಬಿಜೆಪಿ ತೊರೆದ ಮಹಾ ಶಾಸಕ ಆಶಿಶ್ ದೇಶಮುಖ್, ಕಾಂಗ್ರೆಸ್ ಸೇರುವ ಸಾಧ್ಯತೆ

ಪ್ರತ್ಯೇಕ ವಿದರ್ಭ ರಾಜ್ಯದ ಬಲವಾದ ಪ್ರತಿಪಾದಕರಾಗಿದ್ದ ಬಿಜೆಪಿ ಶಾಸಕ ಆಶಿಶ್ ದೇಶಮುಖ್ ಅವರು ಮಂಗಳವಾರ...
ಆಶಿಶ್ ದೇಶಮುಖ್
ಆಶಿಶ್ ದೇಶಮುಖ್
Updated on
ನಾಗ್ಪುರ: ಪ್ರತ್ಯೇಕ ವಿದರ್ಭ ರಾಜ್ಯದ ಬಲವಾದ ಪ್ರತಿಪಾದಕರಾಗಿದ್ದ ಬಿಜೆಪಿ ಶಾಸಕ ಆಶಿಶ್ ದೇಶಮುಖ್ ಅವರು ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಆಶಿಶ್ ದೇಶಮುಖ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು, ಈ ಸಂಬಂಧ ಇಂದು ವಾರ್ಧಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ನಾಗ್ಪುರ ಜಿಲ್ಲೆಯ ಕಟೋಳ್ ಕ್ಷೇತ್ರದ ಶಾಸಕರಾಗಿರುವ ದೇಶಮುಖ್ ಅವರು ನಾಳೆ ವಿಧಾನಸಭೆ ಸ್ಪೀಕರ್ ಹರಿಭಾವು ಬಾಗ್ಡೆ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಿದ್ದಾರೆ.
ಬಿಜೆಪಿ ಸರ್ಕಾರ ರೈತರ ಸಮಸ್ಯೆಗಳನ್ನು ಮತ್ತು ಯುವಕರನ್ನು ಕಡೆಗಣಿಸಿದೆ. ಬಿಜೆಪಿ ದೇಶದಲ್ಲಿ ವಿಭಜನೆ ಮತ್ತು ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ದೇಶಮುಖ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಮತ್ತು ಯುವಕರ ಸ್ಥಿತಿ ಚಿಂತಾಜನಕವಾಗಿದೆ. ಆದರೆ ಬಿಜೆಪಿ ಮಾತ್ರ ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com