ಬೆದರಿಕೆ, ಒಡೆದು ಆಳುವ ನೀತಿ, ಮತದೃವೀಕರಣ ನೀತಿಗಳನ್ನು ಮೋದಿ ಸರ್ಕಾರ ಅಳವಡಿಸಿಕೊಂಡಿದೆ. ಆರ್ ಎಸ್ಎಸ್ ಹಾಗೂ ಬಿಜೆಪಿ ಮಹಾತ್ಮಾ ಗಾಂಧಿ ಅವರ ಪರಂಪರೆಯ ಮೇಲೆ ಚುನಾವಣೆ ದೃಷ್ಟಿಯಿಂದ ಹಕ್ಕಿ ಪ್ರತಿಪಾದಿಸುವ ಬೂಟಾಟಿಕೆ ಪ್ರದರ್ಶಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ತೀರ್ಮಾನಿಸಿದೆ.