ಇಂದು ಪುದುಚೆರಿಯ ಉಪ್ಪಾಳಂನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ, ಸಚಿವರು ಸಹ ಭಾಷಣ ಮೊಟಕುಗೊಳಿಸುವಂತೆ ಶಾಸಕನಿಗೆ ಸೂಚಿಸಿದರೂ ಭಾಷಣ ಮುಂದುವರೆಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಿರಣ್ ಬೇಡಿ ಅವರು ಮೈಕ್ ಆಫ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ಕೋಪಗೊಂಡ ಶಾಸಕ ಅಣ್ಬಳಗನ್ ಅವರು, ಕಿರಣ್ ಬೇಡಿ ಅವರ ವಿರುದ್ಧ ಏರುಧ್ವನಿಯಲ್ಲಿ ಮಾತನಾಡತೊಡಗಿದರು.