ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸದೇ ಇದ್ದ ಸಿಬಿಐ ನಡೆಯನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಸ್ಪಷ್ಟನೆ ನೀಡಿರುವ ಸಿಬಿಐ, ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿರುವುದು ಜಾಗೃತ ಹಾಗೂ ಜವಾಬ್ದಾರಿಯುತ ತೀರ್ಮಾನವೇ ಆಗಿದೆ ಎಂದು ಸಮರ್ಥಿಸಿಕೊಂಡಿದೆ. ಅಷ್ಟೇ ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ರಾಜಕೀಯ ಪ್ರೇರಿತವಾಗಿದ್ದು, ಜನಪ್ರಿಯತೆಗಳಿಸುವುದಕ್ಕೆ ಮಾಡಿರುವ ಕೃತ್ಯ ಎಂದು ಸಿಬಿಐ ಹೇಳಿದೆ.