ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಗುಂಡಿಗೆ 2 ನಾಗರೀಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಶ್ರೀನಗರದ ಕರ್ಫಾಲಿ ಮೊಹಲ್ಲಾದಲ್ಲಿ ನಾಗರೀಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಕರ್ಫಾನಿ ಮೊಹಲ್ಲಾ ಬಳಿ ಬಂದಿರುವ ಉಗ್ರರು ನಾಗರೀಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಲೆ ಮೂವರು ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಇಬ್ಬರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಮೊದಲ ಹಂತದ ನಗರ ಸ್ಥಳೀಯ ಚುನಾವಣೆ ನಡೆಯಲಿದ್ದು, ಈ ನಡುವಲ್ಲೇ ಉಗ್ರರು ದಾಳಿ ನಡೆಸಿದ್ದಾರೆ.
ಪ್ರಸ್ತುತ ಸಾವನ್ನಪ್ಪಿರುವ ಇಬ್ಬರು ನಾಗರೀಕರು ರಾಜಕೀಯ ಹಿನ್ನೆಲೆಯುಳ್ಳವರಾಗಿದ್ದು, ಈ ಕುರಿತಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಇಸ್ಮಾಯಿಲ್ ಪರ್ರೇ ಅವರು ಹೇಳಿದ್ದಾರೆ.