ಈ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಹ ಮಾತನಾಡಿದ್ದು, ಪ್ರಧಾನಿ ಅಭ್ಯರ್ಥಿಯೇ ಇಲ್ಲದೇ ಬಿಜೆಪಿಗೆ ಪರ್ಯಾಯವಾದ ಒಕ್ಕೂಟ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡದೇ ಇದ್ದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರನಡೆದಿದ್ದ ಚಂದ್ರಬಾಬು ನಾಯ್ಡು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯುಪಿಎ, ಎನ್ ಡಿಎ ಎರಡೂ ಮೈತ್ರಿಕೂಟದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ಈಗಿನಷ್ಟು ಕೆಟ್ಟ ದಿನಗಳನ್ನು ಕಂಡಿರಲಿಲ್ಲ. ಅಗತ್ಯವಾದರೆ ಬಿಜೆಪಿಗೆ ಪರ್ಯಾಯವಾದ ರಂಗ ರಚಿಸುವಲ್ಲಿ ತಾವು ಪ್ರಮುಖ ಪಾತ್ರ ವಹಿಸಲು ಸಿದ್ಧ ಎಂದು ಹೇಳಿದ್ದಾರೆ.