ನವದೆಹಲಿಯ ಚುನಾವಣಾ ಆಯೋಗ ಕಚೇರಿಯಲ್ಲಿ ಮದ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಮಾಡಲು ನಿರ್ಧರಿಸಿತ್ತು. ಐದು ರಾಜ್ಯಗಳಾದ ಮಧ್ಯಪ್ರದೇಶ, ಛತ್ತಿಸ್ಘಡ, ರಾಜಸ್ಥಾನ್, ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದ ರಾಮನಗರ ಹಾಗೂ ಜಮಖಂಡಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ, ಘೋಷಣೆ ಮಾಡಲು ನಿರ್ಧರಿಸಿತ್ತು, ಆದರೆ 12.30ಕ್ಕೆ ಇದ್ದ ಸುದ್ದಿಗೋಷ್ಠಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.