ಜು.30 ರಂದು ಕೇಂದ್ರ ಸರ್ಕಾರ ಎನ್ ಆರ್ ಸಿ ಬಗ್ಗೆ ಮಾಹಿತಿ ನೀಡಿ, 40 ಲಕ್ಷ ಜನರನ್ನು ಎನ್ ಆರ್ ಸಿ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಹೇಳಿತ್ತು. "ಎನ್ ಆರ್ ಸಿ ಪಟ್ಟಿಯಿಂದ ಹೊರಗಿಡಲಾಗುವವರನ್ನು ಬಾಂಗ್ಲಾಗೆ ಗಡಿಪಾರು ಮಾಡುವುದಿಲ್ಲ ಎಂದು ಪ್ರಧಾನಿ ಮೋದಿಯೇ ನಮಗೆ ಭರವಸೆ ನೀಡಿದ್ದಾರೆ, ಬಾಂಗ್ಲಾದಲ್ಲಿ ವರ್ಷಾಂತ್ಯಕ್ಕೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ, ಈ ಸಂದರ್ಭದಲ್ಲಿ ಬಾಂಗ್ಲಾ ಅಕ್ರಮ ವಲಸಿಗರನ್ನು ಗಡಿಪಾರು ಮಾಡಿ ಅಸ್ಥಿರತೆ ಉಂಟುಮಾಡುವುದಿಲ್ಲ ಎಂದು ಭಾರತ ನಮಗೆ ನಿರಂತರ ಭರವಸೆ ನೀಡಿದೆ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ರಾಜಕೀಯ ಸಲಹೆಗಾರರಾದ ಹೆಚ್ ಟಿ ಇಮಾಮ್ ಪಿಟಿಐ ಸಂದರ್ಶನದಲ್ಲಿ ಹೇಳಿದ್ದಾರೆ.