ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವಂತೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸವಾಲು ಎಸೆದಿದ್ದಾರೆ.
ಉನ್ನಾವೋ ಕ್ಷೇತ್ರದಿಂದ ರಾಹುಲ್ ಗಾಂಧಿ ಗೆಲುವು ಸಾಧಿಸಿದರೆ ತಾವು ರಾಜಕೀಯ ತೊರೆಯುವುದಾಗಿ ಹೇಳಿರುವ ಮಹಾರಾಜ್ ಒಂದು ವೇಳೆ ಈ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸೋತರೆ ದೇಶವನ್ನು ತೊರೆದು ಇಟಲಿಗೆ ಹೋಗಬೇಕು ಎಂದು ಹೇಳಿದ್ದಾರೆ.
ನೆಹರೂ ವಂಶದ ಕುಡಿ ದೇಶದ ಯಾವುದೇ ಭಾಗದಲ್ಲೂ ಸ್ಪರ್ಧಿಸಿದ್ದರೂ ಗೆಲುವು ಸಾಧಿಸುವುದಿಲ್ಲ. 2014 ರ ಚುನಾವಣೆಯಂತೆ 2019ರ ಚುನಾವಣೆಯಲ್ಲೂ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರವನ್ನು ಮತ್ತೆ ಹಿಡಿಯಲಿದೆ. ನರೇಂದ್ರ ಮೋದಿ ಅವರೇ ಇನ್ನೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಾಕ್ಷಿ ಮಹಾರಾಜ್ ಭವಿಷ್ಯ ನುಡಿದಿದ್ದಾರೆ.
Advertisement