ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ನ.1ರವರೆಗೆ ಚಿದಂಬರಂ, ಪುತ್ರ ಕಾರ್ತಿಗೆ ಬಂಧನವಿಲ್ಲ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ.1 ರವರೆಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸದಂತೆ ದೆಹಲಿ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ...
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ
Updated on
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ.1 ರವರೆಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸದಂತೆ ದೆಹಲಿ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ. 
ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ರಾಷ್ಟ್ರೀಯ ತನಿಖಾ ದಳ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಮನವಿ ಮಾಡಿಕೊಂಡಿರುವ ಹಿನ್ನಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ.ಸಾಯಿನಿಯವರು ನ.1ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ. 
ಚಿದಂಬರಂ ಅವರ ಪರ ವಕೀಲರಾದ ಪಿ.ಕೆ.ದುಬೆ ಮತ್ತು ಹರ್ಷದೀಪ್ ಸಿಂಗ್ ಅವರು ಸಲ್ಲಿಕೆ ಮಾಡಿರುವ ಅರ್ಜಿಗಳ ಮೇಲಿನ ವಾದ ಮಂಡನೆಗೆ ಮತ್ತು ವಿಸ್ತೃತ ಉತ್ತರ ಸಲ್ಲಿಕೆಗೆ ಕಾಲಾವಕಾಶ ಬೇಕೆಂದು ಸಿಬಿಐ ಹಾಗೂ ಇಡಿ ಪರವಾಗಿ ಹಾಜರಿದ್ದ ಅಡಿಶ್ನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ನಿತೀಶಾ ರಾಣ್ ಅವರು ಮನವಿ ಮಾಡಿಕೊಂಡಿದ್ದರು. 
ಈ ಹಿನ್ನಲೆಯಲ್ಲಿ ವಿಶೇಷ ನ್ಯಾಯಾಧೀಶ ಸಾಯಿನಿ ಅರ್ಜಿಯನ್ನು ಪರಿಗಣಿಸಿ ವಿಚಾರಣೆಯನ್ನು ನ.1ಕ್ಕೆ ಮುಂದೂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com