ಬಿಜೆಪಿ ಸಂತೋಷ ಹಂಚುವುದರಲ್ಲಿ ಹಾಗೂ ಜನರನ್ನು ಒಗ್ಗೂಡಿಸುವ ತತ್ವದಲ್ಲಿ ನಂಬಿಕೆ ಇಟ್ಟಿದ್ದರೆ ಕಾಂಗ್ರೆಸ್ ಪಕ್ಷ ಒಂದು ಕುಟುಂಬಕ್ಕಾಗಿ ದೇಶವನ್ನೇ ಒಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಅ.10 ರಂದು 5 ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಗುಜರಾತ್ ನಲ್ಲಿ ವಲಸಿಗರಾಗಿರುವ ಉತ್ತರ ಭಾರತದ ನೌಕರರು ಹಲ್ಲೆ ಭಯದಿಂದ ವಾಪಸ್ ತೆರಳುತ್ತಿದ್ದಾರೆ ಎಂಬ ವದಂತಿಗಳನ್ನೂ ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ದೇಶವನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.