ಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಮೂವರು ಸಾವು, 10 ಮಂದಿಗೆ ಗಾಯ
ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿಮ್ಲಾ: ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಹೈಲಾ ಬಜಾರ್ ಬಳಿಯ ಸೇತುವೆ ಬಳಿಕ ಕಳೆದ ರಾತ್ರಿ 7-30 ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ.
ಹಿಮಾಚಲ ಪ್ರದೇಶದ ಶಿಕ್ಷಣ ಸಚಿವ ಸುರೇಶ್ ಭಾರದ್ವಾಜ್ ಅವರ ಸಹೋದರ ಕೂಡಾ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.