ಬಿಜೆಪಿ-ಶಿವಸೇನೆ ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತ, ರಾಜ್ಯಕ್ಕೆ ಅಲ್ಲ: ಪವಾರ್

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದು, ಲೋಕಸಭೆಗೆ ಮಾತ್ರ ಈ ಮೈತ್ರಿ ಸೀಮಿತವಾಗಲಿದೆ ಎಂದು ಹೇಳಿದ್ದಾರೆ.
ಶರದ್ ಪವಾರ್
ಶರದ್ ಪವಾರ್
ಮುಂಬೈ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದು, ಲೋಕಸಭೆಗೆ ಮಾತ್ರ ಈ ಮೈತ್ರಿ ಸೀಮಿತವಾಗಲಿದೆ ಎಂದು ಹೇಳಿದ್ದಾರೆ. 
ರಾಜ್ಯ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿರುವ ಶರದ್ ಪವಾರ್, ಶಿವಸೇನೆ-ಬಿಜೆಪಿ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿರಲಿದೆ. ಆದರೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಏರ್ಪಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಇದೇ ವೇಳೆ ಲೋಕಸಭೆ, ವಿಧಾನಸಭೆ ಚುನಾವಣೆಗಳು ಏಕ ಕಾಲಕ್ಕೆ ನಡೆಯುವುದರ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿರುವ ಶರದ್ ಪವಾರ್, ಈಗ ಪರಿಸ್ಥಿತಿಗಳು ಬದಲಾಗಿದೆ. ಏಕಕಾಲಕ್ಕೆ ಲೋಕಸಭೆ-ವಿಧಾನಸಭೆ ಚುನಾವಣೆಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಂಡಿದ್ದರೂ ಸಹ ಬಿಜೆಪಿ-ಶಿವಸೇನೆ ಮೈತ್ರಿ ಹದಗೆಟ್ಟಿದೆ.  ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶಿವಸೇನೆ ಈಗಾಗಲೇ ಸ್ಪಷ್ಟನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com