ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಹೇಳಿಕೆ: ಮಲೆಯಾಳಂ ನಟನ ವಿರುದ್ಧ ಪ್ರಕರಣ ದಾಖಲು

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂಬ ಹೇಳಿಕೆ ನೀಡಿದ್ದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಪ್ರಕರಣ ದಾಖಲಾಗಿದೆ.
ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಹೇಳಿಕೆ: ಮಲೆಯಾಳಂ ನಟನ ವಿರುದ್ಧ ಪ್ರಕರಣ ದಾಖಲು
ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಹೇಳಿಕೆ: ಮಲೆಯಾಳಂ ನಟನ ವಿರುದ್ಧ ಪ್ರಕರಣ ದಾಖಲು
Updated on
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂಬ ಹೇಳಿಕೆ ನೀಡಿದ್ದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಪ್ರಕರಣ ದಾಖಲಾಗಿದೆ. 
ಮಲಯಾಳಂ ನಟನ ಹೇಳಿಕೆಯನ್ನು ಬೆದರಿಕೆ ಎಂದು ಪರಿಗಣಿಸಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಕೊಲ್ಲಂ ಜಿಲ್ಲೆಯ ಚವರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಟ ತುಳಸಿ, ಶಬರಿಮಲೆಗೆ ಹೋಗುವ ಮಹಿಳೆಯರ ದೇಹವನ್ನುಎರಡು ಭಾಗವಾಗಿ ಕತ್ತರಿಸಬೇಕು. ಅದರಲ್ಲಿ ಒಂದು ಭಾಗವನ್ನು ದೆಹಲಿಗೆ ಮತ್ತು ಇನ್ನೊಂದು ಭಾಗವನ್ನು ತಿರುವನಂತಪುರದ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಬೇಕು ಎಂದು ವಿವಾದಾತ್ಮ ಹೇಳಿಕೆ ನೀಡಿದ್ದರು.  ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com