ಪ್ರಧಾನಿ ಮೋದಿ ಹತ್ಯೆ ಬೆದರಿಕೆ: ದೆಹಲಿ ಪೊಲೀಸ್ ಆಯುಕ್ತರಿಗೆ ಮೇಲ್

ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ದುಷ್ಕರ್ಮಿಗಳು​ ಪ್ಲ್ಯಾನ್​ ಮಾಡಿರುವುದಾಗಿ ಈ ಮೇಲ್ ...
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ದುಷ್ಕರ್ಮಿಗಳು​ ಪ್ಲ್ಯಾನ್​ ಮಾಡಿರುವುದಾಗಿ ಈ ಮೇಲ್ ಸಂದೇಶ ರವಾನೆಯಾಗಿದೆ.
ಈ ಸಂಬಂಧ ದೆಹಲಿ ಪೊಲೀಸ್​ ಕಮಿಷನರ್ ಗೆ ಇ-ಮೇಲ್​ನಲ್ಲಿ ಬೆದರಿಕೆ ಒಡ್ಡಿರುವ ದುಷ್ಕರ್ಮಿಗಳು, 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುತ್ತೇವೆ ಎಂದು ಒಂದು ಸಾಲಿನಲ್ಲಿ ತಿಳಿಸಿದ್ದಾರೆ. ಹಾಗೇ ಮೇಲ್​ನಲ್ಲಿ ಹತ್ಯೆ ಮಾಡುವ ದಿನಾಂಕ ಮತ್ತು ವೇಳೆಯನ್ನು ನಮೂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಸ್ಸಾಂ ನ ಜೈಲಿನಿಂದ ಇ ಮೇಲ್ ರವಾನೆಯಾಗಿದೆ ಎಂದು ಶಂಕಿಸಲಾಗಿದೆ . ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಭದ್ರತೆ ನೀಡಲು ತೀರ್ಮಾನಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com