ಬ್ಯಾಂಕ್'ಗೆ ನುಗ್ಗಿರುವ ದುಷ್ಕರ್ಮಿಗಳು 10 ಗ್ರಾಹಕರು, 6 ಮಂದಿ ಸಿಬ್ಬಂದಿಗಳು ಸೇರಿ ಒಟ್ಟು 16 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಬಳಿಕ ಕ್ಯಾಶಿಯರ್ ಸಂತೋಷ್ ಬಳಿಯಿದ್ದ ಹಣವನ್ನು ಕಸಿಯಲು ಯತ್ನಿಸಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆತನ ಮೇಲೆ ಗುಂಡು ಹಾರಿಸಿ, ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಸಂತೋಷ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆತ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆಂದು ಪೊಲೀಸರು ಹೇಳಿದ್ದಾರೆ.