ಗುರುಗ್ರಾಮ: ಸೆಷನ್ಸ್ ಕೋರ್ಟ್ ನ್ಯಾಯಾಧೀಶರ ಪತ್ನಿ ಹಾಗೂ ಮಗನ ಮೇಲೆ ಅಂಗ ರಕ್ಷಕನೇ ಗುಂಡು ಹಾರಿಸಿರುವ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ನ್ಯಾ.ಕೃಷ್ಣಕಾಂತ್ ಜಿಲ್ಲಾ ನ್ಯಾಯಾಧೀಶರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿ ಅಧಿಕಾರಿ ಅವರಿಗೆ ಕರೆ ಮಾಡಿ ನಿಮ್ಮ ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿದ್ದೇನೆ. ಹೋಗಿ ನೋಡಿ ಎಂದು ಹೇಳಿದ್ದಾರೆ.