ಇಂಡೋ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದಸರಾ ಆಚರಿಸಲು ರಾಜನಾಥ್ ಸಿಂಗ್ ನಿರ್ಧಾರ

ಅತಿ ಸೂಕ್ಷ್ಮ ಪ್ರದೇಶವಾಗಿರುವ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದಸರಾ ಆಚರಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಿರ್ಧರಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ...
ಗೃಹ ಸಚಿವ ರಾಜನಾಥ ಸಿಂಗ್
ಗೃಹ ಸಚಿವ ರಾಜನಾಥ ಸಿಂಗ್
Updated on
ನವದೆಹಲಿ: ಅತಿ ಸೂಕ್ಷ್ಮ ಪ್ರದೇಶವಾಗಿರುವ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದಸರಾ ಆಚರಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಿರ್ಧರಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಯೋಧರೊಂದಿಗೆ ದಸರಾ ಆಚರಿಸಲು ಭಾರತ-ಪಾಕಿಸ್ತಾನ ಗಡಿಗೆ ತೆರಳಲಿರುವ ರಾಜನಾಥ್ ಸಿಂಗ್ ಅವರು, ಈ ವೇಳೆ ಸೇನಾಪಡೆಯ ಶಸ್ತ್ರಾಸ್ತ್ರಗಳು, ಆಯುಧಗಳಿಗೆ ಪೂಜೆ ಸಲ್ಲಿಸಲಿದ್ದಾರೆಂದು ವರದಿಗಳು ತಿಳಿಸಿವೆ. 
ಕೇಂದ್ರ ಸರ್ಕಾರದ ಹಿರಿಯ ಸಚಿವರೊಬ್ಬರು ಭಾರತದ ಗಡಿಯಲ್ಲಿ ಸೇನೆಯ ಶಸ್ತ್ರಾಸ್ತ್ರಗಳಿಗೆ ಪೂಜೆ ನೆರವೇರಿಸುತ್ತಿರುವುದು ಇದೇ ಮೊದಲು. 
ರಾಜಸ್ಥಾನದ ಬಿಕನೇರ್ ಬಳಿಯಿರುವ ಭಾರತ ಮತ್ತು ಪಾಕಿಸ್ತಾನ ಗಡಿಗೆ ಅ.19 ರಂದು ಗೃಹ ಸಚಿವರು ಭೇಟಿ ನೀಡಲಿದ್ದು, ಈ ವೇಳೆ ಯೋಧರೊಂದಿಗೆ ದಸರಾ ಹಬ್ಬವನ್ನು ಆಚರಿಸಲಿದ್ದಾರೆಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com