ಉತ್ತರಪ್ರದೇಶ: ಬೊಗಳುತ್ತಿದ್ದ ನಾಯಿಗೆ ಹೊಡೆದ ವ್ಯಕ್ತಿ ಮೇಲೆ ಗುಂಡಿನ ದಾಳಿ!

ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಜಾಫರ್ನಗರ: ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ. 
ಸಚಿನ್ ಕಶ್ಯಪ್ ಎಂಬುವವರು ನಿನ್ನೆ ಸಂಜೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ನಾಯಿಯೊಂದು ಅವರನ್ನು ನೋಡಿ ಬೊಗಳಲು ಆರಂಭಿಸಿದೆ. ಅಲ್ಲದೆ, ಹಿಂಬಾಲಿಸಲು ಆರಂಭಿಸಿದೆ. 
ಈ ವೇಳೆ ಕಶ್ಯಪ್ ನಾಯಿಗೆ ಹೊಡೆದಿದ್ದಾರೆ. ಇದಕ್ಕೆ ಸ್ಥಳದಲ್ಲಿದ್ದ ಮೂವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಾತಿನ ಚಕಮಕಿಗಳೂ ಕೂಡ ನಡೆದಿದೆ. ಈ ವೇಳೆ ಕಶ್ಯಪ್ ಮೇಲೆ ಕೆಂಡಾಮಂಡಲಗೊಂಡಿರುವ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ. 
ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com