ಜೆಎನ್ ಯು ವಿದ್ಯಾರ್ಥಿಯ ಪತ್ತೆಗಾಗಿ ನಾವು ಎಲ್ಲಾ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇವು. ಅಲ್ಲದೆ ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ದೆಹಲಿಗೆ ತಮ್ಮ ತಂಡಗಳನ್ನು ಕಳುಹಿಸಿದ್ದೇವು. ನಜೀಬ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರುಪಾಯಿ ಬಹುಮಾನ ಸಹ ಘೋಷಿಸಿದ್ದೇವೆ. ದೇಶಾದ್ಯಂತ ಆತನ ಫೋಟೋವನ್ನು ಹಂಚಲಾಗಿತ್ತು. ಈ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಜೀಬ್ ಅಹ್ಮದ್ ಪತ್ತೆಯಾಗಿಲ್ಲ ಮತ್ತು ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ ಎಂದು ಸಿಬಿಐ ತನ್ನ ಮುಕ್ತಾಯ ವರದಿಯಲ್ಲಿ ತಿಳಿಸಿದೆ.