ತಿರುವನಂತಪುರಂ: ಇತಿಹಾಸ ಪ್ರಸಿದ್ಧ ಕೇರಳದ ಧಾರ್ಮಿಕ ಕೇಂದ್ರ ಶಬರಿಮಲೆ ನಾಳೆಯಿಂದ ಪುನರ್ ಆರಂಭಗೊಳ್ಳಲಿದ್ದು, ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪ ದರ್ಶನ ಪಡೆದು ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸುವ ಬಗ್ಗೆ ಟ್ರಾವಂಕೂರು ದೇವಸ್ಥಾನ ಮಂಡಳಿ ಹಾಗೂ ಪಂಡಲಂ ರಾಯಲ್ ಕುಟುಂಬ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ ಇಂದು ನಡೆದ ಮಾತುಕತೆಯಲ್ಲಿ ಒಮ್ಮತ ಮೂಡದೆ ವಿಫಲವಾಗಿದೆ.
ಸಭೆಯಿಂದ ಹೊರ ನಡೆದ ಪಂಡಲಂ ಪ್ಯಾಲೇಸ್ ಸಮನ್ವಯ ಸಮಿತಿ ಅಧ್ಯಕ್ಷ ಶಶಿಕುಮಾರ್ ವರ್ಮಾ, ಭಕ್ತಾಧಿಗಳು ಎತ್ತಿದ ಸಮಸ್ಯೆಗಳ ಬಗ್ಗೆ ಸಹಮತ ಮೂಡದೆ ಸಭೆ ವಿಫಲವಾಗಿದೆ. ಶಬರಿಮಲೆಯಲ್ಲಿ ಮಹಿಳೆಯರು ಪೂಜೆ ಸಲ್ಲಿಸಲು ಅವಕಾಶ ನೀಡುವ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಕೂಡಲೇ ಮರು ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಲಾಯಿತು ಎಂದು ಹೇಳಿದರು.
Advertisement