ಅಲ್ಲದೇ ಅಲಹಾಬಾದ್ ಮರುನಾಮಕರಣದ ಕುರಿತು ಸುಳಿವು ಬಿಟ್ಟುಕೊಟ್ಟಿದ್ದ ಸಿಎಂ ಯೋಗಿ ಆದಿತ್ಯಾನಾಥ್ ಅವರು,'ಗಂಗೆ ಹಾಗೂ ಯಮುನೆಯರು ಕೂಡುವ ಪವಿತ್ರ ಸಂಗಮ ಸ್ಥಳವಾದ ಕಾರಣ ಮತ್ತು ಈ ಊರು ಎಲ್ಲ ಪ್ರಯಾಗಗಳ ರಾಜನಾದ ಕಾರಣ ಅಲಹಾಬಾದ್ ಅನ್ನು ಪ್ರಾಯಾಗ್ರಾಜ್ ಎಂದು ಕರೆಯುತ್ತೇವೆ. ಅಲಹಾಬಾದ್ ಅನ್ನು ಪ್ರಯಾಗ್ರಾಜ್ ಎಂದು ಕರೆಯಬೇಕೆಂಬುದು ಕೆಲವರ ಆಶಾಯವಾಗಿದೆ. ಎಲ್ಲರೂ ಒಪ್ಪಿದರೆ ಈ ನಗರವನ್ನು ಪ್ರಯಾಗ್ರಾಜ್ ಎಂದು ಕರೆಯುತ್ತೇವೆ. ಇದೊಂದು ಉತ್ತಮ ಆರಂಭವಾಗಲಿದೆ' ಎಂದು ಹೇಳಿದ್ದರು.