2014 ರಂತೆ ಈ ಬಾರಿ ಯಾವ ಅಲೆಯೂ ಇರುವುದಿಲ್ಲ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತೀವ್ರವಾಗಿ ಕಿಡಿಕಾರಿದ್ದು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ...
ಮುಂಬೈ: ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತೀವ್ರವಾಗಿ ಕಿಡಿಕಾರಿದ್ದು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ವಿಜಯದಶಮಿ ಆಚರಣೆ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ. 2014ರಂತೆಯೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಶನಿ ಹಾಗೂ ಮಂಗಳ ದೇಶದ ಭವಿಷ್ಯಕ್ಕೆ ಕಂಟಕವಾಗಿದೆ. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆಂಬುದು ನಿಮಗೆ ಗೊತ್ತಿರಬಹುದು ಎಂದು ತಿಳಿಸಿದ್ದಾರೆ.