2014 ರಂತೆ ಈ ಬಾರಿ ಯಾವ ಅಲೆಯೂ ಇರುವುದಿಲ್ಲ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ

ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತೀವ್ರವಾಗಿ ಕಿಡಿಕಾರಿದ್ದು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ...
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತೀವ್ರವಾಗಿ ಕಿಡಿಕಾರಿದ್ದು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. 
ಮುಂಬೈನಲ್ಲಿ ನಡೆದ ವಾರ್ಷಿಕ ವಿಜಯದಶಮಿ ಆಚರಣೆ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ. 2014ರಂತೆಯೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಶನಿ ಹಾಗೂ ಮಂಗಳ ದೇಶದ ಭವಿಷ್ಯಕ್ಕೆ ಕಂಟಕವಾಗಿದೆ. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆಂಬುದು ನಿಮಗೆ ಗೊತ್ತಿರಬಹುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com