ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರೈಲ್ವೇ ಮಂಡಳಿ ಮುಖ್ಯಸ್ಥ ಅಶ್ವಾನಿ ಲೋಹಾನಿಯವರು, ದಸರಾ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಕುರಿತಂತೆ ನಮಗೆ ಯಾವುದೇ ರೀತಿಯ ಮಾಹಿತಿಗಳನ್ನೂ ನೀಡಿರಲಿಲ್ಲ. ನಿಗದಿತ ವೇಗದಲ್ಲಿ ರೈಲುಗಳು ಚಲಿಸುತ್ತಿದ್ದವು. ಜನರು ಹಳಿಗಳ ಬಳಿ ಇರುವುದನ್ನು ನಿರೀಕ್ಷಿಸಿರಲಿಲ್ಲ. ಹೀಗಾಗಿ ಸ್ಥಳದಲ್ಲಿ ಯಾವುದೇ ರೈಲ್ವೇ ಸಿಬ್ಬಂದಿಗಳೂ ಕೂಡ ಇರಲಿಲ್ಲ. ಹಳಿಗಳನ್ನು ದಾಟುವ ಸ್ಥಳಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ. ಚಾಲಕರು ಎಮರ್ಜೆನ್ಸಿ ಬ್ರೇಕ್ ಹಾಕಿದ್ದರೂ ದೊಡ್ಡ ದುರಂತವೇ ಸಂಭವಿಸುತ್ತಿತ್ತು ಎಂದು ಹೇಳಿದ್ದಾರೆ.