ಅಮೃತಸರ ದುರಂತ: ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ಲ- ರೈಲ್ವೇ ಇಲಾಖೆ ಸ್ಪಷ್ಟನೆ

ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೇಂದ್ರ ರೈಲ್ವೇ ಇಲಾಖೆ, ಕಾರ್ಯಕ್ರಮಕ್ಕೆ ಅನುಮತಿಯನ್ನೇ ನೀಡಿರಲಿಲ್ಲ, ಆದರೂ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಪ್ರಕರಣದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಶನಿವಾರ ಹೇಳಿದೆ...
ಅಪಘಾತದಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ಅಪಘಾತದಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ನವದೆಹಲಿ: ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೇಂದ್ರ ರೈಲ್ವೇ ಇಲಾಖೆ, ಕಾರ್ಯಕ್ರಮಕ್ಕೆ ಅನುಮತಿಯನ್ನೇ ನೀಡಿರಲಿಲ್ಲ, ಆದರೂ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಪ್ರಕರಣದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಶನಿವಾರ ಹೇಳಿದೆ. 
ನಾವು ಯಾವುದನ್ನು ಮುಚ್ಚಿಟ್ಟಿಲ್ಲ. ಕಾರ್ಯಕ್ರಮಕ್ಕೆ ಅನುಮತಿಯನ್ನೇ ನೀಡಿರಲಿಲ್ಲ. ಸ್ಥಳೀಯ ಅಧಿಕಾರಿಗಳು ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿದ್ದಾರೆ. ಹೀಗಾಗಿ ದುರ್ಘಟನೆಯ ಜವಾಬ್ದಾರಿಯನ್ನು ಸ್ಥಳೀಯ ಆಡಳಿತ ಮಂಡಳಿಯೇ ಹೊರಬೇಕೆಂದು ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ. 
ಅಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಸ್ಥಳದಲ್ಲಿ ಸೇರಿದ್ದರು, ರೈಲುಗಳನ್ನೇಕೆ ನಿಲ್ಲಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಿದ್ದರಿಂದ ಸಾಕಷ್ಟು ಹೊಗೆ ತುಂಬಿತ್ತು. ಹೀಗಾಗಿ ಯಾವುದೇ ದೃಶ್ಯಗಳೂ ಕಾಣಿಸಿಲ್ಲ ಎಂದು ತಿಳಿಸಿದ್ದಾರೆ. 
ಘಟನಾ ಸ್ಥಳಕ್ಕೆ ಸ್ಥಳೀಯ ಆಧಿಕಾರಿಗಳು, ಇಲಾಖೆ ಪ್ರಮುಖ ಅಧಿಕಾರಿಗಳು ಧಾವಿಸಿದ್ದು, ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ನೋಡಿಕೊಳ್ಳುತ್ತಿದ್ದಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com