ಮಾಧ್ಯಮವೊಂದು ವರದಿ ಮಾಡಿರುವಂತೆ 61 ಜನರ ಧಾರುಣ ಸಾವಿಗೆ ಕಾರಣವಾದ ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರೈಲ್ವೇ ಇಲಾಖೆ, ದುರಂತದಲ್ಲಿ ರೈಲ್ವೇ ಇಲಾಖೆಯಿಂದ ಯಾವುದೇ ರೀತಿಯ ದೋಷವಾಗಿಲ್ಲ. ಅಲ್ಲದೆ ಸ್ಥಳೀಯ ಆಡಳಿತ ಕೂಡ ದಸರಾ ಕಾರ್ಯಕ್ರಮದ ಕುರಿತು ರೈಲ್ವೇ ಇಲಾಖೆಗೆ ಮಾಹಿತಿ ನೀಡಿರಲಿಲ್ಲ. ಅಲ್ಲದೆ ದಸರಾ ಆಚರಣೆ ಕುರಿತು ರೈಲು ಚಾಲಕನಿಗೂ ಮಾಹಿತಿ ಇರಲಿಲ್ಲ. ಹೀಗಾಗಿ ಆತನ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ ಎಂದು ತಿಳಿದುಬಂದಿದೆ.