ಶಬರಿಮಲೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿಹೆಚ್'ಪಿ ವಕ್ತಾರ ವಿನೋದ್ ಬನ್ಸಾಲ್ ಅವರು, ಶಬರಿಮಲೆ ದಕ್ಷಿಣ ಭಾರತದ ಅಯೋಧ್ಯೆಯಿದ್ದಂತೆ. ಯಾವುದೇ ವಯೋಮಾನದ ಮಹಿಳೆಯರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಭಕ್ತರು ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟಿಸುತ್ತಿರುವವರಿಗೆ ಈ ಮೂಲಕ ಧನ್ಯವಾದಗಳನ್ನು ಹೇಳುತ್ತೇನೆಂದು ಹೇಳಿದ್ದಾರೆ.