ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಪ್ರತಿಕ್ರಿಯೆ ನೀಡಿದ್ದು, ಮೋದಿ ನೇತಾಜಿ ಹಾಗೂ ಸರ್ದಾರ್ ಪಟೇಲ್ ಅವರನ್ನು ರಾಜಕೀಯಕ್ಕೆ ಎಳೆತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 24X7 ರಾಜಕೀಯದ ಬಗ್ಗೆಯೇ ಯೋಚನೆ ಮಾಡುತ್ತಿರುತ್ತಾರೆ. ಹತಾಶೆಗೊಳಗಾಗಿರುವ ಮೋದಿ ನೇತಾಜಿ ಹಾಗೂ ಸ್ವಾತಂತ್ರ್ಯ ಚಳುವಳಿಯ ಮೇಲೆ ಹಕ್ಕು ಪ್ರತಿಪಾದನೆಗೆ ಮುಂದಾಗಿದ್ದಾರೆ ಎಂದು ಸಿಂಘ್ವಿ ಹೇಳಿದ್ದಾರೆ.