ಅ.21 ರಂದು ನೇತಾಜಿ ಸುಭಾಷ್ ಚಂದ್ರ ಬೋಸರು ಸ್ಥಾಪಿಸಿದ್ದ ಆಝಾದ್ ಹಿಂದ್ ಫೌಜ್ ನ 75 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತಾಜಿ ಬೋಸರ ನೇತೃತ್ವದಲ್ಲಿ ಆಝಾದ್ ಹಿಂದ್ ಫೌಜ್ ನ ಸಾಧನೆಗಳನ್ನು ಸ್ಮರಿಸಿದ್ದು, ಸೂರ್ಯ ಮುಳುಗದ ಸಾಮ್ರಾಜ್ಯದವರ ವಿರುದ್ಧ ನೇತಾಜಿ ಜನತೆಯನ್ನು ಒಗ್ಗೂಡಿಸಿದ್ದರು ಎಂದು ಹೇಳಿದ್ದಾರೆ.