ಈ ವೇಳೆ ಬಾಂಬ್ ಸ್ಫೋಟಗೊಂಡಿರುವ ಪರಿಣಾಮ 7 ನಾಗರೀಕರು ಸಾವನ್ನಪ್ಪಿದ್ದಾರೆ. ಈ ನಡುವೆ ಘಟನೆ ಬಳಿಕ ಭದ್ರತಾ ಪಡೆ ಹಾಗೂ ಯುವಕರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಈ ನಡುವೆ 7 ನಾಗರೀಕರ ಸಾವು ಹಾಗೂ ನಾಗರೀಕರು ಗಾಯಗೊಂಡಿರುವ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಕಾಶ್ಮೀರದಾದ್ಯಂತ ಇಂದು ಬಂದ್ ಆಚರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.