ದೇವಾಲಯದ ಹುಂಡಿಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಬರಿಮಲೆಯನ್ನು ರಕ್ಷಿಸಿ, ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ಸಂದೇಶಗಳನ್ನು ಹೊಂದಿದ್ದ ಚೀಟಿಗಳನ್ನು ಹಾಕಿದ್ದರು. ಪರಿಣಾಮವಾಗಿ ದೇವಾಲಯಕ್ಕೆ ಹುಂಡಿಯಿಂದ ಬರುತ್ತಿದ್ದ ಆದಾಯ 45 ಲಕ್ಷ ರೂಪಾಯಿಯಷ್ಟು ಕುಸಿದಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸರ್ಕಾರದ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿಯೂ ಯಾವ ಹಿಂದೂವೂ ಹುಂಡಿಗಳಿಗೆ ಹಣ ಹಾಕಬಾರದೆಂಬ ಚಳುವಳಿಯನ್ನು ಪ್ರಾರಂಭಿಸಲಾಗಿತ್ತು.